Pages

Wednesday, May 23, 2007

ನಾಳೆಗಳ ನಿರೀಕ್ಷೆಯಲ್ಲಿ...


ಈ ಚಿತ್ರ ಕಿಶೋರ್ ಅವರು ಬರೆದದ್ದು.

ಅಕ್ಕ ತಮ್ಮನ ಜೋಡಿ ನಿಂತಿಹುದು
ಮೆಟ್ಟಿಲಿನ ಬಳಿಯಲ್ಲಿ
ಹುಸಿಮುನಿಸು -ತಮ್ಮನ ಜತೆಗೆ
ಮುಗುಳುನಗೆ -ಅಕ್ಕನ ಮೊಗದಲ್ಲಿ||

ನೋಡು ತಮ್ಮಾ ಏರಬೇಕಾದ ದಾರಿಯೆಡೆಗೆ
ಒಮ್ಮೆ ತಿರುಗಿ ನೋಡು..
ಮುಖತಿರುಗಿಸಿದರೆ ಹೇಗೆ ? ನಮ್ಮ ನಾಳೆಗಳು
ಇರುವುದಲ್ಲಿ! ಅತ್ತ ಓಡು..||

ಒಂದರ ನಂತರ ಇನ್ನೊಂದು
ಹತ್ತಬೇಕು ಮೆಟ್ಟಲು
ಸತತ ಪ್ರಯತ್ನ , ಛಲ ಬೇಕೇ
ಬೇಕು ಗುರಿ ಮುಟ್ಟಲು||

ನೋವೊ ನಲಿವೋ ಪಯಣಿಸುತಿರಬೇಕು
ಪಯಣಕೆ ಹೆದರಬೇಡ,ನೀ ಮುಂದೆ ಸಾಗು
ನ್ಯಾಯ ಮಾರ್ಗದಲಿಮುನ್ನಡೆದರೆ ಸಾಕು
ಧೈರ್ಯದಿಂದಲೆ ನೀ ಮುನ್ನಗ್ಗು||

ಬೇರೆಬೇರೆಯಾದರೂ ನಮ್ಮ ಪಯಣದ ಹಾದಿ
ಜತೆಗಿರುವೆ ನಾ , ನೆನಪಾದಾಗಲೆಲ್ಲ
ನಮ್ಮ ಒಡನಾಟ,ಪ್ರೀತಿ ಮರೆಯಾಗದು
ಮಮತೆ ಇಹುದು ಹೃದಯದದೊಳಗೆಲ್ಲ||

Thursday, May 3, 2007

ಪನೀರ್ ಮಟರ್


ಪನೀರ್: ೨೦೦ಗ್ರಾಂ
ಬಟಾಣಿ :೨೦೦ ಗ್ರಾಂ
ಈರುಳ್ಳಿ :೨
ಟೊಮಾಟೊ:೨
ಶುಂಠಿ:ಒಂದು ಸಣ್ಣ ತುಂಡು
ಹಾಲು: ೧/೨ ಲೋಟ
ಬೆಳ್ಳುಳ್ಳಿ ಎಸಳು:೬
ಉಪ್ಪು:ರುಚಿಗೆ ತಕ್ಕಷ್ಟು
ಮೆಣಸಿನ ಹುಡಿ: ೨ ಚಮಚ
ಸಕ್ಕರೆ :೧ ಚಮಚ
ಬೆಣ್ಣೆ :ಸ್ವಲ್ಪ



೧.ಪನೀರನ್ನು ಸಣ್ಣ ಘನಾಕೃತಿಯ ಹೋಳುಗಳಾಗಿ ಕತ್ತರಿಸಿ.ಒಂದು ಬಾಣಲೆಯಲ್ಲಿ ಸ್ವಲ್ಪ ಬೆಣ್ಣೆ ಹಾಕಿ, ಬಿಸಿ ಮಾಡಿ,ಅದರಲ್ಲಿ ಪನೀರ್ ತುಂಡುಗಳನ್ನು ಹಾಕಿ, ಹೊಂಬಣ್ಣ ಬರುವವರೆಗೆ ಹುರಿಯಿರಿ.ಪನೀರನ್ನು ಹೊರತೆಗೆದು ಒಂದು ಪಾತ್ರೆಯಲ್ಲಿ ಹಾಕಿಡಿ.
೨.ಟೊಮಾಟೊ,ಬೆಳ್ಳುಳ್ಳಿ ಎಸಳು,ಶುಂಠಿ ಇವನ್ನು ಒಟ್ಟಿಗೆ ಮಿಕ್ಸಿಯಲ್ಲಿ ನೀರು ಹಾಕದೆ ರುಬ್ಬಿ .
೩.ಬಟಾಣಿಯನ್ನು ಕುಕ್ಕರ್ ನಲ್ಲಿ ಬೇಯಿಸಿ ತೆಗೆದಿಡಿ.
೪.ಬಾಣಲೆಯಲ್ಲಿ ಬೆಣ್ಣೆ ಹಾಕಿ,ನೀರುಳ್ಳಿಯನ್ನು ಕಂದು ಬಣ್ಣ ಬರುವವರೆಗೆ ಹುರಿಯಿರಿ.
೫.ಈಗ ಟೊಮಾಟೊ, ಬೆಳ್ಳುಳ್ಳಿ ಎಸಳು,ಶುಂಠಿ ಇವುಗಳ ಮಿಶ್ರಣವನ್ನು ಬಾಣಲೆಗೆ ಸುರಿಯಿರಿ.
೬.ಟೊಮೆಟೊ ಹಸಿವಾಸನೆ ಹೋಗುವ ತನಕ ಮಂದ ಉರಿಯಲ್ಲಿ ಬೇಯಿಸಿ.
೭.ಈ ಮಿಶ್ರಣಕ್ಕೆ ಪನೀರ್ ತುಂಡುಗಳು ಹಾಗೂ ಬೇಯಿಸಿದ ಬಟಾಣಿ ಸೇರಿಸಿ.
೮.ಇದಕ್ಕೆ ಸ್ವಲ್ಪ ಹಾಲು,೧ ಚಮಚ ಸಕ್ಕರೆ ಹಾಕಿ.
೯.ಈಗ ಉಪ್ಪು,ಮೆಣಸಿನ ಪುಡಿಯನ್ನು ಹಾಕಿ.ಸ್ವಲ್ಪ ಹೊತ್ತು ಕಲಕುತ್ತಿರಿ.
೧೦.ಈಗ ಪನೀರ್ ಮಟರ್ ತಯಾರಾಯ್ತು.
೧೧.ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ.ಚಪಾತಿ ಜತೆ ತಿನ್ನಲು ಬಹಳ ರುಚಿ!!